Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪಾಪ ನಿವೇದನೆ ಮಾಡದೆ ನಾ ಮೌನದಿಂದಿರಲು I ದಿನವೆಲ್ಲ ನರಳಿ ಸವೆದುಹೋದವು ನನ್ನೆಲುಬುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು [ನನ್ನ ಪಾಪವನ್ನು] ಅರಿಕೆಮಾಡದೆ ಇದ್ದಾಗ ದಿನವೆಲ್ಲಾ ನರಳುವದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು; ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:3
26 ತಿಳಿವುಗಳ ಹೋಲಿಕೆ  

ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.


ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.


ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.


ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.


ನನ್ನ ಮಾಂಸಚರ್ಮಗಳನ್ನು ಕ್ಷೀಣಿಸುವಂತೆ ಮಾಡಿ, ನನ್ನ ಎಲುಬುಗಳನ್ನು ಮುರಿದಿದ್ದಾನೆ;


ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.


ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.


ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.


ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ.


ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.


ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.


ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು