Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 33:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರಾಣರಕ್ಷಣೆಗೆ ಸಾಲದು ಅಶ್ವದಳ I ಆತ್ಮರಕ್ಷಣೆಗೆ ಬಾರದು ಅಶ್ವಬಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಜೀವರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ. ಅವುಗಳ ಬಲವು ನಿನ್ನನ್ನು ರಕ್ಷಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಬಿಡುಗಡೆಗೆ ಕುದುರೆಯ ಬಲ ವ್ಯರ್ಥವಾಗಿದೆ; ಅದಕ್ಕೆ ಮಹಾಶಕ್ತಿ ಇದ್ದರೂ ಅದು ರಕ್ಷಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 33:17
12 ತಿಳಿವುಗಳ ಹೋಲಿಕೆ  

ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.


ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.


ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.


ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.


ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು