Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:14
26 ತಿಳಿವುಗಳ ಹೋಲಿಕೆ  

ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.


ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ಜ್ಞಾನಿಯ ಬೋಧನೆ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.


ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.


ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.


ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.


ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು