Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ದುರುಳನೋರ್ವ ಮಹಾಗರ್ವದಿಂದ ಬಾಳುತ್ತಿದ್ದ I ಹುಲುಸಾಗಿ ಬೆಳೆದ ದೇವದಾರು ಮರದಂತಿದ್ದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸುರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವದನ್ನು ನೋಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮಹಾದುಷ್ಟನನ್ನು ನಾನು ನೋಡಿದ್ದೇನೆ. ಅವನು ಮಹಾವೃಕ್ಷದಂತೆ ಬಲಿಷ್ಠನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದುಷ್ಟರು ದೊಡ್ಡ ಅಧಿಕಾರದಲ್ಲಿರುವುದನ್ನು ನಾನು ಕಂಡೆನು; ಅವರು ಹಸಿರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:35
16 ತಿಳಿವುಗಳ ಹೋಲಿಕೆ  

ಮೂರ್ಖನು ಬೇರೂರುವುದನ್ನು ನಾನು ನೋಡಿದೆನು. ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವುದಕ್ಕೆ ಆಸ್ಪದವಾಯಿತು.


“ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”


ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,


ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ


ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.


ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.


“ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.


ಆ ಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿ ಬಿದ್ದು ಇಲ್ಲವಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು