Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಉಪಕಾರಕ್ಕೆ ಪ್ರತಿಯಾಗಿ ಅಪಕಾರ ಸಲ್ಲಿಸುವವರು ಒಳ್ಳೆಯದನ್ನು ಅನುಸರಿಸುವ ನನ್ನನ್ನು ಎದುರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಉಪಕಾರವನ್ನು ಮಾಡಿದ್ದರೂ ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು. ನಾನು ಒಳ್ಳೆಯದನ್ನು ಮಾಡಬೇಕೆಂದರೂ ಅವರು ನನ್ನನ್ನು ವಿರೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುತ್ತಿದ್ದಾರೆ. ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:20
18 ತಿಳಿವುಗಳ ಹೋಲಿಕೆ  

ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.


ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.


ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.


ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?


ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,


ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;


ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.


ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲು ಗೋಡೆಯಂತಿದ್ದರು.


ದಾವೀದನು ತಿರುಗಿ ಯೆಹೋವನನ್ನು, “ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ” ಎಂದು ಕೇಳಿದಾಗ ಆತನು, “ಒಪ್ಪಿಸಿಕೊಡುವರು” ಎಂದು ಉತ್ತರಕೊಟ್ಟನು.


ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ, ಫಿಲಿಷ್ಟಿಯರೊಡನೆ ಯುದ್ಧಮಾಡಿ, ಅವರನ್ನು ಸಂಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.


ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.


ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.


ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.


ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು