Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮುಳುಗಿಸಿಬಿಟ್ಟಿವೆ ನನ್ನ ಅಪರಾಧಗಳೆನ್ನನು I ಅಮುಕಿಬಿಟ್ಟಿವೆ ಹೊರಲಾರದ ಹೊರೆಯಂತೆನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಅಪರಾಧಗಳು ನನ್ನನ್ನು ಮುಣುಗಿಸಿ ಬಿಟ್ಟವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತೆ ನನ್ನನ್ನು ಅದಿವಿುಬಿಟ್ಟವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:4
9 ತಿಳಿವುಗಳ ಹೋಲಿಕೆ  

ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.


“ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.


ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.


ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು