Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಯಾವನನ್ನು ನಂಬಿದ್ದೆನೋ ಯಾವನು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ ಅಂಥ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:9
13 ತಿಳಿವುಗಳ ಹೋಲಿಕೆ  

ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.


“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.


ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ.


ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.


ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು