Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹಿಂಸಕರಿಂದ ಸಂರಕ್ಷಿಸುವಾತ ನೀನೆ I ಹಗೆಗಳಿಗೆ ಆಶಾಭಂಗ ತರುವಾತ ನೀನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಿಂಸಕರಿಂದ ಬಿಡಿಸಿದವನು ನೀನೇ; ನೀನೇ ಹಗೆಗಳಿಗೆ ಆಶಾಭಂಗಪಡಿಸಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದೆ. ನಮ್ಮ ಶತ್ರುಗಳನ್ನು ನಾಚಿಕೆಗೆ ಗುರಿಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ನೀವು ನಮ್ಮ ವೈರಿಗಳ ಮೇಲೆ ನಮಗೆ ಜಯವನ್ನು ಕೊಟ್ಟಿದ್ದೀರಿ. ನೀವು ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:7
19 ತಿಳಿವುಗಳ ಹೋಲಿಕೆ  

ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,


ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.


ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.


ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.


ಯೆಹೋವನು ಈಟಿಕತ್ತಿಗಳಿಲ್ಲದೇ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರಿಗೆಲ್ಲಾ ತಿಳಿದುಬರುವುದು. ಯಾಕೆಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ. ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು” ಅಂದನು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.


ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.


ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು