Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸತ್ಯತೆದೈನ್ಯನೀತಿಗಳನ್ನು ಸ್ಥಾಪಿಸುವದಕ್ಕಾಗಿ ಆಡಂಬರದಿಂದ ವಾಹನಾರೂಢನಾಗಿ ವಿಜಯೋತ್ಸವದೊಡನೆ ಹೊರಡೋಣವಾಗಲಿ. ನಿನ್ನ ಭುಜವೀರ್ಯದಿಂದ ಭಯಂಕರಕೃತ್ಯಗಳು ನಡೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಸತ್ಯತೆ ದೀನತ್ವ ಹಾಗು ನೀತಿಗೋಸ್ಕರ ನಿಮ್ಮ ಘನತೆಯಿಂದ ಜಯದ ಸವಾರಿ ಮಾಡಿರಿ. ನಿಮ್ಮ ಬಲಗೈ ಮಹಾಕೃತ್ಯಗಳನ್ನು ಪ್ರಕಾಶಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:4
26 ತಿಳಿವುಗಳ ಹೋಲಿಕೆ  

ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.


ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.


ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.


ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.


ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. ಸೆಲಾ


ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.


ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು