Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನಿನ್ನ ರಾಜದಂಡವು ನ್ಯಾಯಸ್ಥಾಪಕವಾದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರೇ, ನಿನ್ನ ಸಿಂಹಾಸನವು ಶಾಶ್ವತವಾದದ್ದು. ಒಳ್ಳೆಯತನವು ನಿನ್ನ ರಾಜದಂಡವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನ್ಯಾಯದಂಡವೇ ನಿಮ್ಮ ರಾಜದಂಡವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:6
18 ತಿಳಿವುಗಳ ಹೋಲಿಕೆ  

ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.


ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.


ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು.


ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು