Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ವಹಿಸಿಕೊಂಡನು ದೇವನು ಸರ್ವಾಧಿಪತ್ಯ I ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:8
18 ತಿಳಿವುಗಳ ಹೋಲಿಕೆ  

ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.


ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.


ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.


ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?


ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.


ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.


“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು