Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರೇ, ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದವರು; ಆದದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವದರಿಂದ ಅವರನ್ನು ದೊಬ್ಬಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:10
41 ತಿಳಿವುಗಳ ಹೋಲಿಕೆ  

ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.


ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”


ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.


ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.


ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.


ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.


ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು


ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.


ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,


ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.


ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ


ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.


ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.


ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.


ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು