Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:21
22 ತಿಳಿವುಗಳ ಹೋಲಿಕೆ  

ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು. ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು.


ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”


ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.


ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.


ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.


ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು.


“ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು