Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:23
31 ತಿಳಿವುಗಳ ಹೋಲಿಕೆ  

ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.


ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.


ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.


ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.


ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.


ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ.


ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,


ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.


ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.


ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.


ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು