Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಎಲೈ ಪ್ರಜೆ ಇಸ್ರಯೆಲ್, ನಾನು ನಿನ್ನ ದೇವರು I ಕಿವಿಗೊಟ್ಟು ಆಲಿಸು ನಾನು ನಿನ್ನ ವಿರುದ್ಧ ವಾದಿಸುವುದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 [ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ಹೀಗೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ ನಿಮ್ಮ ದೇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನನ್ನ ಜನರೇ, ಕೇಳಿರಿ, ನಾನು ಮಾತನಾಡುತ್ತಿದ್ದೇನೆ, ಇಸ್ರಾಯೇಲೇ, ನಿಮಗೆ ವಿರೋಧವಾಗಿ ಹೀಗೆಂದು ನಾನು ಸಾಕ್ಷಿ ಕೊಡುವೆನು: ನಾನು ದೇವರು, ಹೌದು ನಿಮ್ಮ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:7
22 ತಿಳಿವುಗಳ ಹೋಲಿಕೆ  

ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಬಿಸಾಡಿಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು’” ಎಂಬುದಾಗಿ ಅವರನ್ನು ಎಚ್ಚರಿಸಿದೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು’ ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ,


“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.


ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.


ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.


ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು