Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೋಧಿಸುವೆನಾಗ ನಿನ್ನ ಮಾರ್ಗವನು ದುರುಳರಿಗೆ I ತಿರುಗಿಕೊಳ್ವರಾಗ ದ್ರೋಹಿಗಳು ನಿನ್ನ ಕಡೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ಜೀವಮಾರ್ಗವನ್ನು ನಾನು ಪಾಪಿಗಳಿಗೆ ಉಪದೇಶಿಸುವೆನು; ಆಗ ಅವರು ನಿನ್ನ ಬಳಿಗೆ ಹಿಂತಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಾನು ಅತಿಕ್ರಮಿಸಿದವರಿಗೆ ನಿಮ್ಮ ಮಾರ್ಗಗಳನ್ನು ಬೋಧಿಸುವೆನು; ಮತ್ತು ಪಾಪಿಗಳು ನಿಮ್ಮ ಕಡೆಗೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:13
24 ತಿಳಿವುಗಳ ಹೋಲಿಕೆ  

ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ


ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.


ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ


ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.


ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.


ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.


ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು