Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:4
23 ತಿಳಿವುಗಳ ಹೋಲಿಕೆ  

ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,


ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.


ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.


ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.


ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.


ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ


ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.


ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.


ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.”


ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.


ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ.


ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು