Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮನದಲಿ “ದೇವನಿಲ್ಲ” ಎನ್ನುವವರು ದುರ್ಮತಿಗಳು I ಹೇಯಕೃತ್ಯವೆಸಗುವವರು ಆ ಭ್ರಷ್ಟಾಚಾರಿಗಳು I ಒಳಿತನ್ನು ಮಾಡುವವರಾರೂ ಇಲ್ಲ ಅವರೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯಕೃತ್ಯಗಳನ್ನು ನಡಿಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:1
24 ತಿಳಿವುಗಳ ಹೋಲಿಕೆ  

ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.


ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು.


ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.


ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


“ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ, ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು?


ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


ಅವನು, “ನಾನು ಕದಲುವುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ.


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,


ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.


ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.


ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.


ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”


ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.


ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು