Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:5
22 ತಿಳಿವುಗಳ ಹೋಲಿಕೆ  

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


“ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ನಾನು ಇಸ್ರಾಯೇಲರ ಶವಗಳನ್ನು ಅವರ ವಿಗ್ರಹಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಬಿಸಾಡಿಬಿಡುವೆನು.


ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.


ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ.


ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.


ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.


ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.


ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.


ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.


ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ.


ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.


ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು