Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 54:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಕೆಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಎಲ್ಲಾ ಇಕ್ಕಟ್ಟಿನಿಂದ ನನ್ನನ್ನು ಬಿಡಿಸಿದ ದೇವರು ನೀವೇ. ನನ್ನ ವೈರಿಗಳ ಮೇಲೆ ಜಯ ಸಾಧಿಸಿದ್ದನ್ನು ನಾನು ನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 54:7
14 ತಿಳಿವುಗಳ ಹೋಲಿಕೆ  

ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.


ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ.


ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.


ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.


ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.


ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.


ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ,


ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು