Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ದೇವರೊಂದಿಗೆ ಸಾಯಂಕಾಲದಲ್ಲಿಯೂ ಮುಂಜಾನೆಯಲ್ಲಿಯೂ ಮಧ್ಯಾಹ್ನದಲ್ಲಿಯೂ ಮಾತಾಡುವೆನು. ನನಗಾಗಿರುವ ದುಃಖವನ್ನು ಆತನಿಗೆ ಹೇಳಿಕೊಳ್ಳುವೆನು. ಆತನು ನನಗೆ ಕಿವಿಗೊಡುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸಂಜೆ, ಮುಂಜಾನೆ, ಮಧ್ಯಾಹ್ನಗಳಲ್ಲಿ ಹಂಬಲಿಸಿ ಮೊರೆಯಿಡುವೆನು. ದೇವರು ನನ್ನ ಧ್ವನಿಯನ್ನು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:17
23 ತಿಳಿವುಗಳ ಹೋಲಿಕೆ  

ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.


ಎಡೆಬಿಡದೆ ಪ್ರಾರ್ಥನೆಮಾಡಿರಿ,


ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.


ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು


ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧ್ಯರಾತ್ರಿಯಲ್ಲಿ ಏಳುವೆನು.


ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,


ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;


ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.


ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.


ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.


ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.


ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.


ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.


ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು.


ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.


ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು