Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇನ್ನೂ ಬೇಯದಿರುವಾಗಲೇ ಒಲೆಗಿಕ್ಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:9
17 ತಿಳಿವುಗಳ ಹೋಲಿಕೆ  

ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.


ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.


ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.


ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.


ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.


ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು.


ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು