Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರ ಬಾಯಿಂದ ಬರುವದೆಲ್ಲಾ ಪಾಪವೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರ ಬಾಯಿಯ ಪಾಪಕ್ಕೂ, ಅವರ ತುಟಿಗಳ ಮಾತಿಗೂ, ಅವರು ನುಡಿಯುವ ಶಾಪಕ್ಕೂ ಅವರ ಗರ್ವವೇ ಅವರನ್ನು ಹಿಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:12
20 ತಿಳಿವುಗಳ ಹೋಲಿಕೆ  

ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.


ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ.


ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.


ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.


“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;


ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.


“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.


ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.


ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.


ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.


ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ಮತ್ತು ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ.


ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು