Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ನರನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:6
23 ತಿಳಿವುಗಳ ಹೋಲಿಕೆ  

ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.


“ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.


ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.


ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.


“ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?


ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ, ನಾನಾದರೋ ದೇವರ ಮುಂದೆ ಕಣ್ಣೀರು ಸುರಿಸುತ್ತಿರುವೆನು.


ಬೇಸರಿಕೆಯ ಮಾಸಗಳೂ, ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ.


ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.


ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು.


ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ, ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?


ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ.


ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು