Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೆಟ್ಟದ್ದನ್ನು ಮಾಡುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ, ಏಕೆಂದರೆ ಯೆಹೋವ ದೇವರು ನನ್ನ ಗೋಳಾಟವನ್ನು ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:8
16 ತಿಳಿವುಗಳ ಹೋಲಿಕೆ  

ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.


ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.


ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.


ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.


ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.


ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,


“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.


ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.


ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ.


ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಸವೆದುಹೋಗಿವೆ.


ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು