Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು I ನಿನ್ನ ಭುಜಬಲದಿಂದ ನಮ್ಮನು ಜಯಗೊಳಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಮಹಾಶಕ್ತಿಯಿಂದ ನಮ್ಮನ್ನು ರಕ್ಷಿಸು! ನಮ್ಮ ಪ್ರಾರ್ಥನೆಗೆ ಉತ್ತರನೀಡಿ ನಿನ್ನ ಪ್ರಿಯರನ್ನು ರಕ್ಷಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:5
19 ತಿಳಿವುಗಳ ಹೋಲಿಕೆ  

ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.


ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.


ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.


ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.


ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?


ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.


“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.


ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.


ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.


“ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.


ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.


ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು