Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗರ್ಭಗುಡಿಯಿಂದಲೇ ದೇವನಿಂತೆಂದನು; “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದು ಕೊಡುವೆನು ಸುಖೋತೆಂಬ ಬಯಲನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬೈಲನ್ನು ಅಳೆದುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ತನ್ನ ಆಲಯದೊಳಗೆ ಹೀಗೆಂದನು: “ನಾನು ಅವರಿಗೆ ಶೆಕೆಮನ್ನು ಕೊಡುವೆನು; ಸುಕ್ಕೋತ್ ಕಣಿವೆಯನ್ನೂ ಅವರಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:6
21 ತಿಳಿವುಗಳ ಹೋಲಿಕೆ  

ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.


ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.


ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.


ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.


ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?


ಮನಸ್ಸೆಯವರ ಸ್ವತ್ತಿನ ಮೇರೆಯು ಆಶೇರ್ ಊರಿನಿಂದ ಶೆಕೆಮಿನ ಪೂರ್ವದಲ್ಲಿರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.


ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.


ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.


ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.


ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.


ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು