Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 65:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಚ್ಚರಿಗೊಳ್ಳುವುವು ನಿನ್ನ ಮಹತ್ಕಾರ್ಯಗಳ ಕಂಡು ಎಲ್ಲೆ ಎಲ್ಲೆಗಳು I ಹರ್ಷಾನಂದಗೊಳ್ಳುವರು ಅದಕಂಡಾ ಪೂರ್ವಪಶ್ಚಿಮ ಪ್ರವಾಸಿಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಭೂವಿುಯ ಕಟ್ಟಕಡೆಗಳಲ್ಲಿ ವಾಸಿಸುವವರೂ ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಮೂಡಣದಿಂದ ಪಡುವಣದವರೆಗೂ ಇರುವವರನ್ನು ಹರ್ಷಗೊಳಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಭೂಲೋಕದಾದ್ಯಂತದಲ್ಲಿರುವ ಜನರು ನಿನ್ನ ಮಹತ್ಕಾರ್ಯಗಳಿಂದ ಆಶ್ಚರ್ಯಚಕಿತರಾಗಿದ್ದಾರೆ. ಸೂರ್ಯೋದಯವೂ ಸೂರ್ಯಸ್ತಮಾನವೂ ನಮ್ಮನ್ನು ಹರ್ಷಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಡೀ ಭೂಮಿಯಲ್ಲಿರುವವರು ನಿಮ್ಮ ಅದ್ಭುತಕಾರ್ಯಗಳಿಗೆ ಅತಿಶಯಗೊಂಡಿದ್ದಾರೆ. ಉದಯಾಸ್ತಮಾನಗಳಲ್ಲಿ ಇರುವವರನ್ನು ಉತ್ಸಾಹ ಧ್ವನಿಗೈಯುವಂತೆ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 65:8
22 ತಿಳಿವುಗಳ ಹೋಲಿಕೆ  

ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.


ಸೂರ್ಯನು ಹಗಲನ್ನು ಆಳುತ್ತಾನೆ, ಆತನ ಪ್ರೀತಿಯು ಶಾಶ್ವತವಾದದ್ದು.


ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.


ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.


ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು.


ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.


ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.


ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ? ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ?


ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.


ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.


ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು