Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಶತ್ರುಗಳೆಮ್ಮ ತಲೆಮೇಲೆ ರಥವನೋಡಗೊಳಿಸಿದೆ I ಅಗ್ನಿಯನೂ ಜಲವನೂ ದಾಟುವಂತೆ ಮಾಡಿದೆ I ಕೊನೆಗೆ ಸಮೃದ್ಧ ನಾಡಿಗೆಮ್ಮನು ಸೇರಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯರು ನಮ್ಮ ತಲೆಗಳ ಮೇಲೆಯೇ ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ಪಾರುಗಾಣಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಶತ್ರುಗಳು ನಮ್ಮ ಮೇಲೆ ನಡೆಯಮಾಡಿದೆ. ನೀನು ನಮ್ಮನ್ನು ಬೆಂಕಿಯಲ್ಲಿಯೂ ನೀರಿನಲ್ಲಿಯೂ ಹಾಯಿಸಿದೆ. ಆದರೂ ಸುರಕ್ಷಿತ ಸ್ಥಳಕ್ಕೆ ನಮ್ಮನ್ನು ತಂದು ಸೇರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮನುಷ್ಯರು ನಮ್ಮ ತಲೆ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀರಿ. ನಾವು ಬೆಂಕಿಯನ್ನೂ ನೀರನ್ನೂ ದಾಟುವಂತೆ ಮಾಡಿದ್ದೀರಿ. ಆದರೆ ನೀವು ನಮ್ಮನ್ನು ಸಮೃದ್ಧಿಯ ಸ್ಥಳದೊಳಗೆ ಬರಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:12
16 ತಿಳಿವುಗಳ ಹೋಲಿಕೆ  

ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”


ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.


ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು