Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 67:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ I ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು. ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 67:2
19 ತಿಳಿವುಗಳ ಹೋಲಿಕೆ  

ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!


ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.


ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.


ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು