Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲ್ಯರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. ದೇವರಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ. ಇಸ್ರಾಯೇಲರ ದೇವರೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುವರು. ದೇವರಿಗೆ ಸ್ತುತಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:35
23 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,


ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.


ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.


ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.


ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.


ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.


ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.


ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.


ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.


ಉತ್ತರದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವುದು, ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ.


ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು