Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ I ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಕಳ್ಳುಸುಬಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲ ರಾಶಿಯಿಂದ ಎಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನನ್ನು ಕಳ್ಳುಸುಬಿನಿಂದ ಮೇಲೆತ್ತು; ಮುಳುಗಿಹೋಗಲು ಬಿಡಬೇಡ. ನನ್ನನ್ನು ದ್ವೇಷಿಸುವ ಜನರಿಂದ ನನ್ನನ್ನು ರಕ್ಷಿಸು. ಈ ಆಳವಾದ ನೀರಿನಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನನ್ನು ಕೆಸರಿನೊಳಗಿಂದ ಬಿಡಿಸಿರಿ. ನಾನು ಮುಳುಗದೆ ಇರಲಿ. ನನ್ನನ್ನು ದ್ವೇಷಿಸಿಸುವವರಿಂದಲೂ ನೀರಿನ ಅಗಾಧದಿಂದಲೂ ನನಗೆ ಬಿಡುಗಡೆ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:14
20 ತಿಳಿವುಗಳ ಹೋಲಿಕೆ  

ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.


ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.


ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.


ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.


ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.


ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.


ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.


ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.


“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು