Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ ನಾನು ಆತನನ್ನು ಕೊಂಡಾಡುವೆನು. ಪರಾತ್ಪರದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:17
19 ತಿಳಿವುಗಳ ಹೋಲಿಕೆ  

ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.


ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.


ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು.


ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.


ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.


ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.


ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.


ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.


ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.


ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.


ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.


ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.


ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.


ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.


ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು