Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:9
36 ತಿಳಿವುಗಳ ಹೋಲಿಕೆ  

ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;


ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?


ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.


ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.


ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.


ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.


ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.


ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.


ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”


ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.


“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.


ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.


ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.


ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.


ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.


ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು