Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಅವನನ್ನು ಹಿಡಿಯಿರಿ; ಅವನಿಗೆ ಸಹಾಯಕರೇ ಇಲ್ಲ” ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದೇನೆಂದರೆ, “ದೇವರು ಅವನನ್ನು ಕೈಬಿಟ್ಟಿದ್ದಾನೆ. ಅವನನ್ನು ಬೆನ್ನಟ್ಟಿ ಹಿಡಿಯಿರಿ, ಅವನನ್ನು ಬಿಡಿಸುವವರು ಯಾರೂ ಇಲ್ಲ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:11
13 ತಿಳಿವುಗಳ ಹೋಲಿಕೆ  

ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.


ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.


ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ


ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು.


“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.


ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.


ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.


ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.


ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು