Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸ್ವಾಮಿ ದೇವಾ, ಸ್ಮರಿಸುವೆನು ನಿನ್ನ ಮಹತ್ಕಾರ್ಯಗಳನೆ I ಪ್ರಕಟಪಡಿಸುವೆನು ನಿನ್ನೊಬ್ಬನ ನ್ಯಾಯನೀತಿಯನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಒಡೆಯನಾದ ಯೆಹೋವನೇ, ನಿನ್ನ ಘನತೆಯ ಕುರಿತು ಹೇಳುತ್ತಲೇ ಇರುವೆನು. ನಿನ್ನೊಬ್ಬನ ಒಳ್ಳೆಯತನವನ್ನು ಕುರಿತು ಮಾತಾಡುತ್ತಲೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸಾರ್ವಭೌಮ ಯೆಹೋವ ದೇವರೇ ನಾನು ನಿಮ್ಮ ಮಹಾಕೃತ್ಯಗಳನ್ನು ಸಾರುವೆನು. ನಿಮ್ಮ ನೀತಿ ಕೃತ್ಯಗಳನ್ನು ಪ್ರಕಟಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:16
23 ತಿಳಿವುಗಳ ಹೋಲಿಕೆ  

ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.


ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು.


ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.


ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.


ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.


ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?


ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?


ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು