Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ಗೌರವವನು ಅಧಿಕರಿಸಯ್ಯಾ I ಮರಳಿ ನೆಮ್ಮದಿಯನು ಪಾಲಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ನನ್ನ ಘನತೆಯನ್ನು ಮೊದಲಿಗಿಂತಲೂ ಹೆಚ್ಚಿಸುವೆ. ನೀನೇ ನನ್ನನ್ನು ಸಂತೈಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ನನ್ನ ಗೌರವವನ್ನು ಹೆಚ್ಚಿಸಿ ನನ್ನನ್ನು ಮತ್ತೊಮ್ಮೆ ಆದರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:21
16 ತಿಳಿವುಗಳ ಹೋಲಿಕೆ  

ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.


ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.


ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.


ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?


ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು