Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು I ಉದ್ಧರಿಸುವನಾತ ದಿಕ್ಕಿಲ್ಲದ ದೀನದಲಿತರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಅವನು ಮೊರೆಯಿಡುವ ಬಡವರನ್ನೂ ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು. ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಅರಸನಿಗೆ ಮೊರೆಯಿಡುವ ಬಡವರನ್ನೂ ಸಹಾಯಕನಿಲ್ಲದ ಬಾಧೆಪಡುವವರನ್ನೂ ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:12
19 ತಿಳಿವುಗಳ ಹೋಲಿಕೆ  

ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.


ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.


ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ,


ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.


ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.


ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ


ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು