Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಮ್ಮ ಆರಾಧನಾಚಿಹ್ನೆಗಳು ಈಗ ಕಾಣುವದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ. ಪ್ರವಾದಿಗಳು ನಮಗೆ ಉಳಿದಿರುವುದಿಲ್ಲ. ಇದು ಎಷ್ಟು ಕಾಲ ಎಂದು ನಾವ್ಯಾರೂ ತಿಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:9
11 ತಿಳಿವುಗಳ ಹೋಲಿಕೆ  

ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.


ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.


ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.


“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.


ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು