Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ I ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಕೋಬವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ ಅಶ್ವಬಲವೂ ಮೈಮರೆತು ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:6
20 ತಿಳಿವುಗಳ ಹೋಲಿಕೆ  

ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.


ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ.


ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.


ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.


ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘ ನಿದ್ರೆ ಮಾಡುತ್ತಿದ್ದಾರೆ; ನಿನ್ನ ಮಹನೀಯರು ದೀರ್ಘನಿದ್ದೆಯಲ್ಲಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸುವವರು ಯಾರೂ ಇಲ್ಲ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”


ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”


ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.


ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು,


ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.


ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.


ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.


ಆದರೆ ನೀನು ಗಾಳಿಯನ್ನು ಊದಿದಾಗ, ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.


ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು