Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ದೇವರನ್ನೇ ಧ್ಯಾನಿಸುತ್ತಾ ನನ್ನ ವ್ಯಥೆಯನ್ನು ಹೇಳಿಕೊಳ್ಳಬಯಸಿದೆ. ಆದರೂ ನನ್ನಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ವ್ಯಥೆಪಡುತ್ತಿರುವಾಗ, ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿಸುವುದರಿಂದ ನನ್ನ ಆತ್ಮವು ಬಳಲಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:3
21 ತಿಳಿವುಗಳ ಹೋಲಿಕೆ  

ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.


ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ.


ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ?


ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದಿ.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ.


ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದಾನೆ; ನಾನು ಸಂತೋಷವನ್ನು ಮರೆಯುವಂತೆ ಮಾಡಿದ್ದಾನೆ.


ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.


ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ?


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.


ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು