Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಏಕೆನೆ, ಅವರಿಗಿರಲಿಲ್ಲ ವಿಶ್ವಾಸ ದೇವರಲಿ I ಇರಲಿಲ್ಲ ನಂಬಿಕೆ ಆತನಾ ಸಲಹುವ ಶಕ್ತಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನಿಗೆ ಇಸ್ರಾಯೇಲ್ಯರ ಮೇಲೆ ಕೋಪವುಂಟಾಯಿತು; ಯಾಕೋಬ್‍ವಂಶದವರಲ್ಲಿ ಬೆಂಕಿಹತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯಾಕೆಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ. ದೇವರು ತಮ್ಮನ್ನು ರಕ್ಷಿಸಬಲ್ಲನೆಂದು ಅವರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:22
10 ತಿಳಿವುಗಳ ಹೋಲಿಕೆ  

ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.


ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.


ಆದರೂ ನೀವು ನಿಮ್ಮ ದೇವರಾದ ಯೆಹೋವನನ್ನು ನಂಬಲೇ ಇಲ್ಲ.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.


ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.


ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.


ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.


ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು