Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆದರೂ ಆತನು ಕರುಣಾಳುವೂ ಅಪರಾಧಿಗಳನ್ನು ಸಂಹರಿಸದೆ ಕ್ಷವಿುಸುವವನೂ ಆಗಿ ತನ್ನ ಸಿಟ್ಟನ್ನೆಲ್ಲಾ ಏರಗೊಡದೆ ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:38
17 ತಿಳಿವುಗಳ ಹೋಲಿಕೆ  

ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.


ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.’”


ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.


ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.


ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.


ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು