Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:71 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

71 ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

71 ಕುರಿಮೇಯಿಸುವಾ ಕಸಬಿನಿಂದವನನು ಬಿಡಿಸಿದನು I ಸ್ವಪ್ರಜೆ ಯಕೋಬ್ಯರನು, ಸ್ವಜನ ಇಸ್ರಯೇಲರನು I ಪರಿಪಾಲಿಸುವಂತೆ ನೇಮಕ ಮಾಡಿದನು ಆತನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

71 ಮರೀಕುರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವಾಸ್ತ್ಯವಾಗಿರುವ ಇಸ್ರಾಯೇಲ್ಯರನ್ನು ಸಾಕುವದಕ್ಕೆ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

71 ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

71 ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ ತಮ್ಮ ಬಾಧ್ಯತೆಯಾದ ಇಸ್ರಾಯೇಲರನ್ನೂ ಮೇಯಿಸುವ ಕುರುಬನನ್ನಾಗಿ ದಾವೀದನನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:71
19 ತಿಳಿವುಗಳ ಹೋಲಿಕೆ  

ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.


ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.


ಅದಕ್ಕೆ ಯಾಕೋಬನು, “ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.


ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.


ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.


ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.


ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು