Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ I ಉರಿಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹುವಾಗಿ ಕುಗ್ಗಿಹೋಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮ್ಮ ಪೂರ್ವಿಕರು ಮಾಡಿದ ಪಾಪಕ್ಕೆ ಬರಬೇಕಾದ ದಂಡನೆಯನ್ನು ನಮ್ಮ ಮೇಲೆ ಬರಗೊಡಿಸಬೇಡ. ಬೇಗನೆ ನಿನ್ನ ಕರುಣೆಯನ್ನು ನಮಗೆ ತೋರು! ನೀನು ನಮಗೆ ಎಷ್ಟೋ ಅಗತ್ಯವಾಗಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪೂರ್ವಿಕರ ಪಾಪಗಳನ್ನು ನಮಗೆ ವಿರೋಧವಾಗಿ ಜ್ಞಾಪಕ ಮಾಡಿಕೊಳ್ಳಬೇಡಿರಿ. ನಿಮ್ಮ ಕರುಣೆಯು ಬೇಗ ನಮ್ಮನ್ನು ಎದುರುಗೊಳ್ಳಲಿ. ನಾವು ಬಹಳವಾಗಿ ಕುಗ್ಗಿಹೋಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:8
18 ತಿಳಿವುಗಳ ಹೋಲಿಕೆ  

ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.


ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.


ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.


ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.


ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.


ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?


ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.


ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”


ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು