Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ I ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನಗೆ ವಿರೋಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವದಕ್ಕೋಸ್ಕರ ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:2
21 ತಿಳಿವುಗಳ ಹೋಲಿಕೆ  

ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.


ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”


ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.


ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ, ಕೋಟೆಗೆ ನಾಶನವನ್ನು ತರುವವನು ಆತನೇ.


ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ


“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.


ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’


ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ


ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು