Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 82:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು I ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ. ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ. ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 82:3
16 ತಿಳಿವುಗಳ ಹೋಲಿಕೆ  

ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.


ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.


ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.


ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”


ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.


ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.


ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.


ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.


ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದೆನೋ?


ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.


“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು