Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದಂಗೆಯೆದ್ದಿಹರಿದೋ ನಿನ್ನ ಶತ್ರುಗಳು I ತಲೆಯೆತ್ತಿಕೊಂಡಿಹರು ನಿನ್ನ ದ್ವೇಷಿಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೋಡು, ನಿನ್ನ ಶತ್ರುಗಳು ಘೋಷಿಸುತ್ತಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚು ಮಾಡುತ್ತಿದ್ದಾರೆ. ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಇಗೋ, ನಿಮ್ಮ ಶತ್ರುಗಳು ಘೋಷಿಸುತ್ತಾರೆ. ನಿಮ್ಮ ವೈರಿಗಳು ತಲೆ ಎತ್ತುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:2
22 ತಿಳಿವುಗಳ ಹೋಲಿಕೆ  

ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.


ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು


ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.


ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!


ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು.


ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.


ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.


ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.


ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.


ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.


ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’


ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.


ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ, ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.


ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.


ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು