Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಮಂದಿರದಲಿ ಕಳೆದ ದಿನವೊಂದು I ತಿಳಿವೆನು ಸಾವಿರ ದಿನಕೂ ಮೇಲೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. ನೀನು ಅಭಿಷೇಕಿಸಿದವನಿಗೆ ಕರುಣೆತೋರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಮ್ಮ ಗುರಾಣಿಯಾಗಿರುವ ದೇವರೇ, ನೋಡಿರಿ. ನಿಮ್ಮ ಅಭಿಷಿಕ್ತನ ಮುಖವನ್ನು ದೃಷ್ಟಿಸಿ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:9
16 ತಿಳಿವುಗಳ ಹೋಲಿಕೆ  

ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.


ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.” ಎಂದು ವಿಜ್ಞಾಪನೆ ಮಾಡಿಕೊಂಡನು.


ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:


ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.


“ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”


“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.


ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು