Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ ನೀನು ನಮ್ಮನ್ನು ಚೈತನ್ಯ ಪಡಿಸುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮ ಜನರು ನಿಮ್ಮಲ್ಲಿ ಸಂತೋಷಪಡುವಂತೆ ನೀವು ತಿರುಗಿ ನಮ್ಮನ್ನು ಉಜ್ಜೀವಿಸುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:6
15 ತಿಳಿವುಗಳ ಹೋಲಿಕೆ  

ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.


ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.


ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?


ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?


‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು